Thursday, June 4, 2026

2026-2027ನೇ ಸಾಲಿನ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಜಂಟಿ ಹೆಸರಿನ ಪ್ರಶಸ್ತಿಗೆ ಹಿರಿಯ ವಿದ್ವಾಂಸ ಡಾ. ಬೋಳಾರ ಶಿವರಾಮ ಶೆಟ್ಟಿ ಆಯ್ಕೆ

 

ಕನ್ನಡ ಹಾಗೂ ತುಳು ಭಾಷೆ, ಸಾಹಿತ್ಯ, ಜಾನಪದ, ಸಂಶೋಧನ ಕ್ಷೇತ್ರಗಳಲ್ಲಿ ವಿದ್ವಾಂಸರಲ್ಲೊಬ್ಬರಾದ ಡಾ. ಬೋಳಾರ ಶಿವರಾಮ ಶೆಟ್ಟಿ ಅವರು ೨೦೨೬ನೇ ಸಾಲಿನ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ (ಜಂಟಿ ಹೆಸರಲ್ಲಿ) ನೀಡಲಾಗುವ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಇವರಿಬ್ಬರ ನೆನಪಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂನ್ ೨೦, ೨೦೨೬ರಂದು ನಡೆಯಲಿರುವುದು. ಪ್ರಶಸ್ತಿಯು ರೂ ೨೦೦೦೦/- ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಡಾ.  ಬಿ.  ಶಿವರಾಮ ಶೆಟ್ಟಿಯವರು ೧೯೫೭ರ ಅಕ್ಟೋಬರ್ ೩ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಬೋಳಾರದಲ್ಲಿ ಜನಿಸಿದರು. ತಂದೆ ದಿವಂಗತ ಬೋಳಾರ ಚಂದಪ್ಪ ಶೆಟ್ಟಿ ಹಾಗೂ ತಾಯಿ ದಿವಂಗತ ಸೇಸಮ್ಮ. ಇವರು ಮೈಸೂರು ವಿಶ್ವವಿದ್ಯಾನಿಲಯದಿಂದ ಮಂಗಳ ಗಂಗೋತ್ರಿಯ ಕನ್ನಡ ಸ್ನಾತಕೋತ್ತರ ಮತ್ತು ಸಂಶೋಧನ ಕೇಂದ್ರದ ಮೂಲಕ ಸ್ನಾತಕೋತ್ತರ ಪದವಿ ಹಾಗೂ ಮಂಗಳೂರು ವಿಶ್ವವಿದ್ಯಾಲಯದಿಂದತುಳುನಾಡಿನ ಸಸ್ಯಜಾನಪದವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ೧೯೮೧ರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಸಂಶೋಧನಾ ಸಹಾಯಕರಾಗಿ, ಉಪನ್ಯಾಸಕರಾಗಿ, ಪ್ರಾಧ್ಯಾಪಕ ಹಾಗೂ ಸಂಸ್ಥೆಯ ಅಧ್ಯಕ್ಷರಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ೨೦೧೯ರಲ್ಲಿ ನಿವೃತ್ತರಾದರು. 

 ಇವರ ಮಾರ್ಗದರ್ಶನದಲ್ಲಿ ೧೦ ಮಂದಿ ವಿದ್ಯಾರ್ಥಿಗಳು ಪಿಎಚ್.ಡಿ. ಪದವಿ ಪಡೆದಿದ್ದಾರೆ. ಕನ್ನಡ ಮತ್ತು ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ ೧೩೦ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ಮಂಡಿಸಿದ್ದಾರೆ. ಇವರ ಸಂಪಾದಕತ್ವದಲ್ಲಿ ಸುಮಾರು ೫೦ಕ್ಕೂ ಅಧಿಕ ಸಂಶೋಧನಾ ಲೇಖನಗಳು ಹಾಗೂ ೧೯ಕ್ಕೂ ಹೆಚ್ಚು ಕೃತಿಗಳು ಪ್ರಕಟಗೊಂಡಿವೆ. ಮಂಗಳೂರು ವಿ.ವಿ ಕನಕದಾಸ ಅಧ್ಯಯನ ಪೀಠ ಮತ್ತು ಸಂಶೋಧನ ಕೇಂದ್ರದ ಸಂಯೋಜಕರಾಗಿ ಹಲವು ಮಹತ್ವದ ಪ್ರಕಟಣೆಗಳನ್ನು  ಹೊರತರುವುದರಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಕನಕ ಚಿಂತನ ಪ್ರಚಾರೋಪನ್ಯಾಸ ಮಾಲಿಕೆಯಂತಹ ಅನೇಕ ಕನಕನಿಗೆ ಸಂಬಂಧಿಸಿದ ಯೋಜನೆಗಳನ್ನು ಜ್ಯಾರಿಗೊಳಿಸಿದ್ದಾರೆಶಿವರಾಮ ಶೆಟ್ಟಿ ಅವರು ಎಸ್. ವಿ.ಪಿ ಕನ್ನಡ ಅಧ್ಯಂiÀi ಸಂಸ್ಥೆಯ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ ಸಂಶೋಧನೆಗೆ ಸಂಬಂಧಪಟ್ಟ ವಿನೂತನ ಕಾರ್ಯಕ್ರಮಗಳೊಂದಿಗೆ ೧೯೬೮ರಿಂದ ಇಲ್ಲಿಯವರೆಗಿನ ವಿದ್ಯಾರ್ಥಿಗಳು, ಸಂಶೋಧನ ಪದವೀಧರರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳನ್ನೊಳಗೊಂಡ ಗಿಳಿವಿಂಡಿನ ಸ್ಥಾಪಕರೂ ಆಗಿದ್ದಾರೆ. ಅಲ್ಲದೆ ಯು.ಜಿ.ಸಿ ಸ್ಯಾಪ್ ಯೋಜನೆಯ ಸಂಯೋಜಕರಾಗಿ, ಗ್ಯಾನ್ ಯೋಜನೆಯ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ. ಹೀಗೆ ನಿರಂತರ ಅಧ್ಯಯನ, ಅಧ್ಯಾಪನ, ಸಂಶೋಧನೆ, ಸಂಪಾದನೆ, ಸಂಘಟನೆಯ ಮೂಲಕ ಕ್ರಿಯಾಶೀಲರಾಗಿರುವ ಇವರು ಕರ್ನಾಟಕ ಸರ್ಕಾರದಕನಕ ಗೌರವಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ ಹಾಗೂ ಕರ್ನಾಟಕ ಸರಕಾರದ ೨೦೨೨-೨೩ನೇ ಸಾಲಿನಕನಕಶ್ರೀಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Tuesday, June 2, 2026

ಶ್ರೀ ಸುಖಾನಂದ ಶೆಟ್ಟಿ ಅವರಿಗೆ ಡಾಕ್ಟರೇಟ್ (26.05.2026)

 


ಉಡುಪಿ: ಶ್ರೀ ಸುಖಾನಂದ ಶೆಟ್ಟಿ  ಅವರುಕೊಲ್ಲೂರು ಒಂದು ಸಾಂಸ್ಕೃತಿಕ ಅಧ್ಯಯನ ಎಂಬ ವಿಷಯದ ಕುರಿತಾಗಿ ನಡೆಸಿದ ಸಂಶೋಧನೆಗೆ ಮಣಿಪಾಲ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ. ಅವರು ಸಂಶೋಧನೆಯನ್ನು ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ (ಆರ್.ಆರ್.ಸಿ) ಮೂಲಕಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ರೇಖಾ ಬನ್ನಾಡಿ ಅವರ ಮಾರ್ಗದರ್ಶನದಲ್ಲಿ ನಡೆಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಎಚ್.ಬಿ. ಬಾಬಯ್ಯ ಶೆಟ್ಟಿ ಮತ್ತು ಶಾರದಾ ಬಿ.ಶೆಟ್ಟಿಯವರ ಪುತ್ರರಾದ ಇವರು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Thursday, May 21, 2026

ಯಕ್ಷಗಾನ ಕೇಂದ್ರ, ಇಂದ್ರಾಳಿ ಉಡುಪಿ ಇದರ ೨೦೨೬-೨೦೨೭ನೇ ಸಾಲಿನ ವಿದ್ಯಾರ್ಥಿಗಳ ಆಯ್ಕೆ ಸಭೆ

 





ಯಕ್ಷಗಾನ ಕೇಂದ್ರ, ಇಂದ್ರಾಳಿ ಇದರ ೨೦೨೬-೨೦೨೭ನೇ ಸಾಲಿನ ಯಕ್ಷಶಿಕ್ಷಣದೊಂದಿಗೆ ಗುರುಕುಲಮಾದರಿಯ  ವಿದ್ಯಾಭ್ಯಾಸಕ್ಕಾಗಿ  7ನೇ ತರಗತಿಯಿಂದ   10ನೇ  ತರಗತಿವರೆಗಿನ  ಆಸಕ್ತ  ವಿದ್ಯಾರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಿದ್ದು,  ಆಯ್ಕೆಯಾದ ವಿದ್ಯಾರ್ಥಿಗಳ ಹಾಗೂ ಪೋಷಕರ ಸಭೆಯನ್ನು ನಡೆಸಲಾಯಿತು. ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷರಾದ  ಪಳ್ಳಿ ಕಿಶನ್ ಹೆಗ್ಡೆ ವಿದ್ಯಾರ್ಥಿಗಳಿಗೆ  ಕೇಂದ್ರದಲ್ಲಿ ವಿದ್ಯಾರ್ಥಿಗಳ ಶಿಸ್ತು, ನಿಯಮ ಪಾಲನೆಯ ಕುರಿತು ಮಾಹಿತಿ ನೀಡಿ ಶುಭ ಹಾರೈಸಿದರು. ಯಕ್ಷಗಾನ ಕೇಂದ್ರದ ಸಲಹಾಸಮಿತಿ ಸದಸ್ಯರಾದ ಭುವನ ಪ್ರಸಾದ್ ಹೆಗ್ಡೆ ಅವರು ವಿದ್ಯಾರ್ಥಿಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿ ಮುಂದೆ ದೇಶದ ಉತ್ತಮ ಪ್ರಜೆಯಾಗುವಂತೆ  ತಮ್ಮ ಜೀವನವನ್ನು ರೂಪಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಕೇಂದ್ರದ ಆಡಳಿತಾಧಿಕಾರಿ ಡಾ.ಬಿ ಜಗದೀಶ್ ಶೆಟ್ಟಿ ಅವರು ಕೇಂದ್ರ ಬೆಳೆದುಬಂದ   ಕುರಿತು ವಿದ್ಯಾರ್ಥಿಗಳಿಗೆ  ಮಾಹಿತಿ ನೀಡಿದರು. ಕೇಂದ್ರದ ಗುರುಗಳಾದ ಉಮೇಶ್ ಸುವರ್ಣ, ಕೃಷ್ಣಮೂರ್ತಿ ಭಟ್, ಬಸವ ಮರಕಾಲ, ವಿದ್ಯಾರ್ಥಿಗಳು   ಯಕ್ಷಗಾನ ತರಬೇತಿಯ  ಕುರಿತು ಸಲಹೆ ಸೂಚನೆ ನೀಡಿದರು.  

Monday, April 27, 2026

೨೦೨೬-೨೭ನೇ ಸಾಲಿನ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಲಕ್ಷ್ಮಣ ವಿ.ಎ ಅವರ “ಗೋಡೆಗೆ ನೇತುಬಿದ್ದ ಭೂಪಟ’ ಕವನಸಂಕಲನ ಆಯ್ಕೆ

 

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಣಿಪಾಲ ನೀಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಯು  ಬೆಂಗಳೂರಿನಲ್ಲಿ ವೈದ್ಯರಾಗಿರುವ ಡಾ. ಲಕ್ಷ್ಮಣ ವಿ. ಅವರ ಗೋಡೆಗೆ ನೇತುಬಿದ್ದ ಭೂಪಟ’ ಕವನಸಂಕಲನಕ್ಕೆ ಲಭಿಸಿದೆ. ಪ್ರಶಸ್ತಿಯು ೧೦೦೦೦/- ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಪ್ರಶಸ್ತಿಪ್ರದಾನ ಕಾರ್ಯಕ್ರಮವು ಆಗಸ್ಟ್ ತಿಂಗಳಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಡಾ. ಲಕ್ಷ್ಮಣ ವಿ. ಮೂಲತಃ ಬೆಳಗಾವಿ ಜಿಲ್ಲೆ ಅಥಣಿ (ಈಗಿನ ಕಾಗವಾಡತಾಲೂಕಿನ ಮೋಳೆ ಗ್ರಾಮದವರು. ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದಾರೆ. ಓದುಕವನಸಂಕಲನ, ಗದ್ಯ ಮತ್ತು ಅಂಕಣ ಬರಹಗಳಲ್ಲಿ ವಿಶೇಷ ಆಸಕ್ತಿಯನ್ನು ಹವ್ಯಾಸವಾಗಿಸಿಕೊಂಡಿರುವ ಲಕ್ಷ್ಮಣ್ ಅವರು ಹಲವಾರು ಕವನ ಸಂಕಲವನ್ನು ಪ್ರಕಟಿಸಿದ್ದಾರೆ. ಎಲೆಕ್ಟ್ರಿಕ್ ಬೇಲಿ ಮತ್ತು ಪಾರಿವಾಳ” ಇವರ ಪ್ರಥಮ ಕವನ ಸಂಕಲನಅಪ್ಪನ ಅಂಗಿ, ಗರ್ದಿ ಗಮ್ಮತ್ತು’, ನೋಡಾ ಗೋಳ ಗುಮ್ಮಟ ನೋಡಾ’, ಮಿಲ್ಟ್ರಿ ಟ್ರಂಕು”, ಕಾಯಿನ್ ಬೂತ್”, ಪರಿಮಳದ ಬಾಕಿ ಮೊತ್ತ”ಮುಂತಾದುವು ಇವರ ಪ್ರಕಟಿತ ಕವನ ಸಂಕಲನಗಳುಬಂಡೆ ಬಸಪ್ಪನ ದೊಡ್ಡಿ ಎಂಬ ಕಥೆಯ ಬೆಳಗಾವಿಯ ರಾಣಿ ಚೆನ್ನಮ್ಮ ಮಹಿಳಾ ವಿ.ವಿ ಪದವಿ ವಿದ್ಯಾರ್ಥಿಗಳಿಗೆ ಪಠ್ಯವಾಗಿದೆಬಸಣ್ಣನ ಸರ್ತಿ ಸೈಕಲ್ ಕಥೆ ಮಂಗಳೂರು ವಿ.ವಿ, ಆಳ್ವಾಸ್ ವಿ.ವಿಯ ಪದವಿ ವಿದ್ಯಾರ್ಥಿಗಳಿಗೆ ಪಠ್ಯವಾಗಿದೆ. ಇವರ ಕವನಸಂಕಲನಗಳಿಗೆ ಕಣವಿ ಕಾವ್ಯ ಪ್ರಶಸ್ತಿ, ವೀಚಿ ಪ್ರಶಸ್ತಿ, ವಿಭಾ ಕಾವ್ಯ ಪ್ರಶಸ್ತಿ, ಅಡ್ವೈಜರ್ ಪ್ರಶಸ್ತಿ, ಸವದತ್ತಿ ಸಹೃದಯ ಕಾವ್ಯ ಪ್ರಶಸ್ತಿ, ಹೊತ್ತಿಗೆ ಕಾವ್ಯ ಪುರಸ್ಕಾರಗಳಲ್ಲದೆ ಹಲವಾರು ದತ್ತಿ ಬಹುಮಾನಗಳು  ಲಭಿಸಿವೆ. ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ಅಂಕಣ ಬರಹ, ಕತೆ, ಕವನ, ವೈಚಾರಿಕ ಬರಹ, ಪ್ರಬಂಧ ಬರಹ ಹಾಗೂ ಅನುಭವ ಕಥನಗಳು ಪ್ರಕಟವಾಗಿವೆ. ಪಿ.ಎಚ್.ಸಿ ಕವಲುಗುಡ್ಡ ಅವರ ಇತ್ತೀಚಿನ ಕಾದಂಬರಿಅಲ್ಲದೆ 'ನಸುಕು' (nasuku.com) ವೆಬ್‌ಸೈಟ್‌ನ ಸಂಪಾದಕತ್ವದಲ್ಲಿ ಸಕ್ರಿಯರಾಗಿದ್ದಾರೆ.