ದಾಖಲೀಕರಣ:
Tuesday, July 7, 2026
ಯಕ್ಷಗಾನ ದಾಖಲೀಕರಣ ಉದ್ಘಾಟನೆ ಹಾಗೂ ವೀರವೃಷಸೇನ ಪುಂಡುವೇಷ ದಾಖಲೀಕರಣ (05.07.2026)
ದಾಖಲೀಕರಣ:
Tuesday, June 30, 2026
ಉಡುಪಿ ಯಕ್ಷಗಾನ ಕೇಂದ್ರ ಸಲಹಾ ಸಮಿತಿಯಿಂದ ಹುಟ್ಟು ಹಬ್ಬ ಆಚರಣೆ (೨೫.೦೬.೨೦೨೬)
ಮಾಹೆ ಸಂಯೋಜಿತ ಉಡುಪಿ ಯಕ್ಷಗಾನ ಕೇಂದ್ರ, ಇಂದ್ರಾಳಿ ಇದರ ಸಲಹಾ ಸಮಿತಿಯಿಂದ ಮಾಹೆಯ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳರ 85ನೇ ಜನ್ಮದಿನೋತ್ಸವವನ್ನು ಜೂನ್ 25ರಂದು ಆಚರಿಸಲಾಯಿತು.
ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ ಶೆಟ್ಟಿ ಸ್ವಾಗತಿಸಿದರು. ಅಧ್ಯಕ್ಷ ಶ್ರೀ ಪಳ್ಳಿ ಕಿಶನ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಹಾರೈಸಿದರು. ಶ್ರೀ ಭುವನ ಪ್ರಸಾದ್ ಹೆಗ್ಡೆ ಸನ್ಮಾನ ಪತ್ರ ವಾಚಿಸಿ, ಲಿಂಗ ಸಮಾನತೆಯಲ್ಲಿ ವಿಶ್ವದಲ್ಲೇ ಪ್ರಥಮ ಸ್ಥಾನ ಪಡೆದ ಮಾಹೆಯನ್ನು ಅಭಿನಂದಿಸಿದರು.
ಯಕ್ಷಸ್ಮರಣಿಕೆ, ಶಾಲು, ಹಾರ, ಪೇಟ ತೊಡಿಸಿ ಡಾ. ಬಲ್ಲಾಳರನ್ನು ಅಭಿನಂದಿಸಲಾಯಿತು. ಸನ್ಮಾನಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಡಾ. ಬಲ್ಲಾಳರು, ಮಾಹೆ ಸದಾ ಯಕ್ಷಗಾನ ಕೇಂದ್ರವನ್ನು ಪ್ರೋತ್ಸಾಹಿಸುತ್ತದೆ ಎಂದರು. ಸದಸ್ಯರಾದ ಮೀನಾ ಲಕ್ಷ್ಮಣಿ ಮತ್ತು ಡಾ. ಶೈಲಜಾ ಭಟ್, ಶ್ರೀ ವಿಶ್ವನಾಥ ಶೆಣೈ, ಪ್ರೊ. ಎಸ್. ವಿ. ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಮಂಜುನಾಥ ಮಯ್ಯ ವಂದಿಸಿದರು.
Monday, June 29, 2026
Sunday, June 28, 2026
ದಿನಾಂಕ: ೨೮.೦೬.೨೦೨೬ರಂದು ಯಕ್ಷಗಾನ ಕೇಂದ್ರ ಇಂದ್ರಾಳಿಯಲ್ಲಿ ಸುಧನ್ವ ಕಾಳಗ ಯಕ್ಷಗಾನ ನಡೆಯಿತು

ದಿನಾಂಕ: ೨೮.೬.೨೦೨೬ರಂದು ಯಕ್ಷಗಾನ ಕೇಂದ್ರ, ಶಿವಪ್ರಭಾ, ಇಂದ್ರಾಳಿ, ಉಡುಪಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಕರ್ನಾಟಕ ಸರಕಾರ, ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಯಕ್ಷಗಾನ ಪ್ರಸಂಗ: ಸುಧನ್ವ ಕಾಳಗ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಸದಸ್ಯರು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ, ಗುರುವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅರ್.ಅರ್.ಸಿ ಯ ಧ್ವನ್ಯಾಲೋಕದಲ್ಲಿ ದಿನಾಂಕ: ೨೬.೦೬.೨೦೨೬ರಂದು ನಡೆದ ಜನಪದ ಕಲೆಗಳ ಸರಣಿ ಕಾರ್ಯಾಗಾರ
ಹಿರಿಯ ವಿದ್ವಾಂಸ ಡಾ. ಪಾದೇಕಲ್ಲು ವಿಷ್ಣು ಭಟ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ವಿವಿಧ ಪ್ರಾಂತ್ಯದ ಭಾರತೀಯ ಜನಪದಕಲೆಗಳನ್ನು ಉಡುಪಿಗೆ ಪರಿಚಯಿಸುತ್ತಿರುವುದು ನಿಜಕ್ಕೂ ಸಂತೋಷದಾಯಕ ವಿಚಾರ. ಪಿಥೋರ ಜನಪದ ಕಲೆಯನ್ನು ನಾನೇ ಮೊದಲಬಾರಿಗೆ ಕೇಳುತ್ತಿರುವೆ. ಇಂತಹ ಕಲೆಗಳು ದೇಶವ್ಯಾಪಿಯಾಗಿ ಪ್ರಸಿದ್ಧಿಯಾಗಲಿ ಎಂದರು. ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕೇಂದ್ರದ ಸಹ ಸಹಸಂಶೋಧಕ ಡಾ. ಅರುಣ್ ಕುಮಾರ್, ಫೌಂಡೇಶನ್ ಅಧ್ಯಕ್ಷರಾದ ಶ್ರೀ ಹಾವಂಜೆ ಮಂಜುನಾಥ ರಾವ್ ಉಪಸ್ಥಿತರಿದ್ದರು. ಕಾರ್ಯಾಗಾರದ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ ಜನಪದ ಕಲೆಗಳ ಸರಣಯಲ್ಲಿ ೨೦ನೆಯ ಕಾರ್ಯಗಾರ ಇದಾಗಿದ್ದು ಇದರ ಮುಖೇನ ಕರಾವಳಿಯ ಕಲಾಸಕ್ತರು ದೇಶೀಯ ಕಲೆಗಳ ಪರಿಚಯವನ್ನು ಹೊಂದುವುದರ ಜೊತೆಗೆ ಅದರ ನೈಸರ್ಗಿಕ ಕಲೆಗಳ ತಾಂತ್ರಿಕತೆ ವಿನ್ಯಾಸ ರೂಪಗಳನ್ನು ಕಲಿಯುವುದಕ್ಕಾಗಿ ಹಮ್ಮಿಕೊಳ್ಳಲಾಗಿದೆ ಎಂದರು. ಪಿಥೋರ ಚಿತ್ರಕಲೆಯನ್ನು ಗುಜರಾತಿನ ರಥ್ವ ಜನಾಂಗದ ನಾರಾನ್ ಬಾಯಿ ಹರಿಬಾಯಿ ರಥ್ವ ಕಲಿಸಿಕೊಟ್ಟರು. ಡಾ. ಹಾವಂಜೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Monday, June 22, 2026
ಡಾ.ಟಿ.ಎನ್. ನಾಗರತ್ನ ಅವರಿಗೆ ೨೦೨೬ರ ಸೇಡಿಯಾಪು ಪ್ರಶಸ್ತಿ
ಕನ್ನಡ ಭಾಷೆ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗೆ ಹಿರಿಯ ಸಾಹಿತಿ, ಕನ್ನಡ ಭಾಷಾತಜ್ಞೆ, ಅನುವಾದಕಿ, ಸಂಶೋಧಕಿ ಡಾ.ಟಿ.ಎನ್. ನಾಗರತ್ನ ಅವರು ೨೦೨೬ನೇ ಸಾಲಿನ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಶಸ್ತಿಯು ರೂ ೧೦೦೦೦/- (ಹತ್ತು ಸಾವಿರ) ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಕಾರ್ಯಕ್ರಮವು ದಿನಾಂಕ: ೧೮.೦೭.೨೦೨೬ರಂದು ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಶಿವಮೊಗ್ಗ ನಗರ ನಿವಾಸಿಗಳಾದ ಶ್ರೀ ಟಿ.ನಾಗಶರ್ಮ ಮತ್ತು ಶ್ರೀಮತಿ ರಾಜಲಕ್ಷ್ಮೀಯವರ ಪುತ್ರಿ ಡಾ.ಟಿ.ಎನ್. ನಾಗರತ್ನ ಅವರು ಮೇ ೨೯, ೧೯೪೫ರಂದು ಜನಿಸಿದರು. ಶಿವಮೊಗ್ಗದಲ್ಲಿ ಬಿ.ಎ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದ ಅದ್ವಿತೀಯರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪಡೆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ೧೯೭೦ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಅಧ್ಯಾಪಕಿಯಾಗಿ ಹಾಗೂ ಸಂಶೋಧನ ಸಹಾಯಕರಾಗಿ ವೃತ್ತಿಜೀವನ ಆರಂಭಿಸಿದರು. ಸುಮಾರು ೩೫ ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ, ಹರಿದಾಸ ಸಾಹಿತ್ಯ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ೨೦೦೩ರಲ್ಲಿ ನಿವೃತ್ತರಾದರು. ನಂತರ ಇವರು ಕನಕದಾಸ ಅಧ್ಯಯನ ಸಂಶೋಧನಾ ಪೀಠದಲ್ಲಿ ಕನಕದಾಸರ ಕೃತಿಗಳ ಸಂಪಾದನೆ ಮತ್ತು ಅನುವಾದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕರ್ನಾಟಕ ಸರ್ಕಾರದ “ಸಮಗ್ರ ದಾಸಸಾಹಿತ್ಯ ಪ್ರಕಟಣ ಯೋಜನೆ”ಯಲ್ಲಿ ಕಾರ್ಯವಾಹಕ ಸಂಪಾದಕಿಯಾಗಿ, ‘ಪುರಂದರ ಪೀಠ’ದ ಸಲಹಾ ಸಮಿತಿಯ ಸದಸ್ಯರಾಗಿ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸದಸ್ಯೆ ಹಾಗೂ ಸಮಗ್ರ ಕನಕ ಸಾಹಿತ್ಯ ಅನುವಾದದ ಬೃಹದ್ಯೋಜನೆಯಲ್ಲಿ ಕನ್ನಡ ಭಾಷಾತಜ್ಞರಾಗಿ ನಿಯುಕ್ತರಾಗಿದ್ದರು. ದಾಸಸಾಹಿತ್ಯಾಧ್ಯಯನ, ಪ್ರಸಾರ, ಬೋಧನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಇವರು ಬರೆದ ಅನೇಕ ಪುಸ್ತಕಗಳೂ, ನೂರಾರು ಲೇಖನಗಳೂ ಪ್ರಕಟವಾಗಿವೆ. ‘ಹರಿದಾಸರ ಭಕ್ತಿ ಸ್ವರೂಪ’, ‘ಶ್ರೀ ಗೋಪಾಲದಾಸರ ಕೃತಿಗಳು’, ‘ಶ್ರೀ ವಾದಿರಾಜರ ಕೃತಿಗಳು’, ‘ಶ್ರೀ ಜಗನ್ನಾಥದಾಸರ ಕೃತಿಗಳು’, ‘ಶ್ರೀ ವ್ಯಾಸರಾಯರ ಕೃತಿಗಳು’ ‘ಹರಪನಹಳ್ಳಿ ಭೀಮವ್ವನ ಹಾಡುಗಳು,’ ‘ಶ್ರೀ ರಾಮದಾಸರ ಕೃತಿಗಳು’, ‘ಶ್ರೀ ಕನಕದಾಸರ ಕೀರ್ತನೆಗಳು’- ಇವು ಇವರ ಕೃತಿಗಳಲ್ಲಿ ಮುಖ್ಯವಾದವು. ಅನೇಕ ವಿಚಾರಸಂಕಿರಣಗಳು, ದಾಸಸಾಹಿತ್ಯ ಗೋಷ್ಠಿಗಳು, ಆಕಾಶವಾಣಿ ಮತ್ತು ದೂರದರ್ಶನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ಕನ್ನಡ ವಿಶ್ವವಿದ್ಯಾಲಯದ ರಾಷ್ಟ್ರೀಯ ಸಮ್ಮೇಳನದಲ್ಲಿ ‘ಗೌರವ ಸಂಮಾನ’, ‘ಹರಿದಾಸ ಸಾಹಿತ್ಯ ವಿದ್ವನ್ಮಣಿ’ ಬಿರುದು- ಅಲ್ಲದೆ ‘ವಿಜಯವಿಠಲ’ ಪ್ರಶಸಿ,್ತ ‘ಹೊಯ್ಸಳ’ ಪ್ರಶಸ್ತಿ ‘ಮಧ್ವ-ಪುರಂದರ’ ಪ್ರಶಸ್ತಿ’ ೨೦೧೮ರಲ್ಲಿ ‘ಸಾಹಿತ್ಯ ಸರಸ್ವತಿ’, ೨೦೦೯ರಲ್ಲಿ ಕರ್ನಾಟಕ ಸರಕಾರದ ಪ್ರತಿಷ್ಠಿತ ‘ಕನಕ ಶ್ರೀ’ ಪ್ರಶಸ್ತಿಗೂ ಇವರು ಭಾಜನರಾಗಿದ್ದಾರೆ. ಇವರು ಸಂಪಾದಿಸಿದ ‘ಶ್ರೀ ಕನಕದಾಸರ ಕೀರ್ತನೆಗಳು’ ಕೃತಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯು ೨೦೧೪ನೇ ವರ್ಷದ ಅತ್ಯುತ್ತಮ ಸಂಪಾದಿತ ಕೃತಿಯೆಂದು ಪರಿಗಣಿಸಿ ಪುಸ್ತಕ ಬಹುಮಾನ ನೀಡಿ ಗೌರವಿಸಿದೆ. ಅಖಿಲಕರ್ನಾಟಕ ಹದಿನಾರನೆಯ ಹಸ್ತಪ್ರತಿ ಸಮೇಳನದ ಸರ್ವಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಕರ್ನಾಟಕ ಸಂಘದಿಂದ ೨೦೨೫ರ ಪ್ರತಿಷ್ಠಿತ ‘ಶಂಬಾ ಜೋಷಿ ಸಂಶೋಧನ’ ಪ್ರಶಸ್ತಿಗೂ ಇವರು ಭಾಜನರಾಗಿದ್ದಾರೆ.
ದಿನಾಂಕ: ೨೦.೦೬.೨೦೨೬ರಂದು ನಡೆದ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್. ಹೆಗ್ಗಡೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ











