ನಾಡಿನ ಹಿರಿಯ ಕವಿ ಪತ್ರಕರ್ತ
ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ ೧೯೭೮ರಲ್ಲಿ ಸ್ಥಾಪಿತವಾದ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಈ ವರ್ಷ ಅಪ್ರಕಟಿತ
ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ
ಈ ಪ್ರಶಸ್ತಿಗೆ ಕವನ ಸಂಕಲನಗಳನ್ನು ಕಳುಹಿಸಲು ಕೊನೆಯ ದಿನಾಂಕ 15.03.2024. ಕಳುಹಿಸಬೇಕಾದ ವಿಳಾಸ:
ಆಡಳಿತಾಧಿಕಾರಿ, ರಾಷ್ಟ್ರಕವಿ ಗೋವಿಂದ ಪೈ
ಸಂಶೋಧನ ಕೇಂದ್ರ, ಎಂ.ಜಿ.ಎಂ. ಕಾಲೇಜು ಆವರಣ,
ಉಡುಪಿ  576102.
ಕಾವ್ಯಪ್ರಕಟನೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ ೧೦,೦೦೦/-ರೂಪಾಯಿಗಳ ಒಂದು ವಾರ್ಷಿಕ ಬಹುಮಾನವನ್ನು ನೀಡಲಾಗುತ್ತದೆ. ಹಸ್ತಪ್ರತಿ ಹಂತದ’ಲ್ಲಿರುವ 40ಕ್ಕೆ ಕಡಿಮೆ ಇಲ್ಲದ, ೫೦ಕ್ಕಿಂತ ಹೆಚ್ಚಿಲ್ಲದ ಕನ್ನಡ ಕವಿತೆಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ಕೊಡಲಾಗುವುದು. ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿಯನ್ನು ಆಯ್ಕೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ ಬ್ಲಾಗ್ https://govindapairesearch.blogspot.com ಅಥವಾ ದೂರವಾಣಿ ಸಂಖ್ಯೆ/ ಮೊಬೈಲ್ ನಂ. 9448868868/ 9480575783; ಕಛೇರಿ: 0820-2521159 ಸಂಪರ್ಕಿಸಬಹುದು.
ಬಹುಮಾನದ ಉಳಿದ ನಿಯಮಗಳು ಹೀಗಿವೆ:-
| 1 | ಕಳೆದ ಐದು ವರ್ಷಗಳಲ್ಲಿ ಬರೆದ ಕನ್ನಡ ಕವಿತೆಗಳು,
  ಬಿಡಿಯಾಗಿ ಪತ್ರಿಕೆಗಳಲ್ಲಿ ಪೂರ್ವ ಪ್ರಕಟಿತವಾದುವು  ಇರಬಹುದು, ಹೊಸದಾಗಿ ರಚಿತವಾದುವೂ ಇರಬಹುದು. | 
| 2 | ತಮ್ಮ ಕವನ ಸಂಕಲನದಲ್ಲಿ ಕನಿಷ್ಠ ೪೦ ಕವನಗಳು ಇರಲೇ ಬೇಕು.   | 
| 3 | ಕವನ ಸಂಕಲನದ ಹೆಸರನ್ನು ಹೊರಭಾಗದಲ್ಲಿ ಸ್ಪಷ್ಟವಾಗಿ ನಮೂದಿಸಿರಬೇಕು. | 
| 4 | ತಮ್ಮ ಕವನಗಳು ಯಾವುದೇ ಕವನಸಂಕಲನದಲ್ಲಿ ಈ ಮೊದಲು ಪ್ರಕಟಗೊಂಡಿರಬಾರದು. | 
| 5 | ಸ್ಪರ್ಧೆಯಲ್ಲಿ ಭಾಗವಹಿಸುವವರ ಹೆಸರು ಮತ್ತು ವಿಳಾಸಗಳು ಪ್ರತ್ಯೇಕ ಹಾಳೆಯಲ್ಲಿರಬೇಕು
  ಹೊರತು ಕವನಸಂಕಲನದ ಯಾವ ಭಾಗದಲ್  ಇರಕೂಡದು (ಇದ್ದಲ್ಲಿ
  ಕವನ ಸಂಕಲನವನ್ನು ತಿರಸ್ಕರಿಸಲಾಗುವುದು). | 
| 6 | ಕವನ ಸಂಕಲನವನ್ನು ಮರಳಿ ಪಡೆಯಲಿಚ್ಛಿಸುವವರು ಸಾಕಷ್ಟು ಅಂಚೆಚೀಟಿಯನ್ನು
  ಅಂಟಿಸಿದ ಲಕೋಟೆಯನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು. | 
| 7 | ಲೇಖಕರು ತಮ್ಮ ಕವನಗಳ ಸಂಗ್ರಹದ ಒಂದು ನಕಲು ಪ್ರತಿಯನ್ನು (ಬೆರಳಚ್ಚು
  ಮಾಡಿದ) 2024 ಮಾರ್ಚ್  15ರ  ಒಳಗೆ ಸಮಿತಿಯ ವಿಳಾಸಕ್ಕೆ  ಕಳುಹಿಸತಕ್ಕದ್ದು. ಮೇ ತಿಂಗಳಲ್ಲಿ ಸಮಿತಿಯು ತನ್ನ ನಿರ್ಣಯವನ್ನು ಕರ್ನಾಟಕದ  ಪತ್ರಿಕೆಗಳಲ್ಲಿ ಜಾಹೀರುಗೊಳಿಸುತ್ತದೆ. | 
| 8 | ಬಹುಮಾನಕ್ಕಾಗಿ ಆಯ್ಕೆಯಾದ ಕವನ ಸಂಕಲನವವನ್ನು–ಡೆಮ್ಮಿ   1/8 ,
  1/12  ಅಥವಾ 1/8 ಆಕಾರದಲ್ಲಿ  ಮುದ್ರಿಸಬೇಕು. | 
| 9 | ಆಯ್ಕೆ ಸಮಿತಿ ತೀರ್ಮಾನ ಪ್ರಕಟವಾದ ಎರಡು ತಿಂಗಳ ಒಳಗಾಗಿ ಮುದ್ರಣ ಮುಗಿದು
  ೧೨ ಪ್ರತಿಗಳು ಸಮಿತಿಯ ವಶ   ಸೇರತಕ್ಕದ್ದು. (ಅದಕ್ಕಿಂತ
  ವೇಳೆ   ಮೀರಿದರೆ ಸಮಿತಿ ಇನ್ನಾರಿಗಾದರೂ
  ಈ ಬಹುಮಾನ ನೀಡಬಹುದು). | 
| 10 | ಸಂಗ್ರಹದ ಮುದ್ರಣ ಪ್ರಕಟಣೆ ಲೇಖಕರೇ ಮಾಡಬೇಕೆಂದೇನೂ ಇಲ್ಲ. ಆದರೆ ಬೇರೆ
  ಪ್ರಕಾಶಕರು ಮಾಡಿದರೆ   ಬಹುಮಾನದ ಮೊತ್ತ ಲೇಖಕರಿಗೆ
  ಮಾತ್ರವೇ   ಸಲ್ಲುತ್ತದೆ. | 
| 11 | ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನ. | 
ಆಡಳಿತಾಧಿಕಾರಿ
 
 





































.jpg)