Friday, October 24, 2025

ದಿನಾಂಕ: 18.10.2025ರಂದು ನಡೆದ ಕೇಶವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

 








ಪದವಿ, ಸ್ನಾತಕೋತ್ತರ ಪದವಿ ಪಠ್ಯಗಳಿಂದ ಇಂದು ಹಳಗನ್ನಡ ದೂರವಾಗುತ್ತಿದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗಿರೀಶ್ ಭಟ್ ಅಜಕ್ಕಳ ಹೇಳಿದರು. ಅವರು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆಶ್ರಯದಲ್ಲಿ ಎಂ.ಜಿ.ಎಂ ಕಾಲೇಜಿನ ಆವರಣದಲ್ಲಿರುವ ಆರ್.ಆರ್.ಸಿಯ ಧ್ವನ್ಯಾಲೋಕ ಸಭಾಂಗಣದಲ್ಲಿ ದಿನಾಂಕ: ೧೮.೧೦.೨೦೨೫ ಶನಿವಾರದಂದು ಹಮ್ಮಿಕೊಂಡಿದ್ದ ೨೦೨೫ನೇ ಸಾಲಿನ ಕೇಶವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ಮಾತನಾಡುತ್ತಿದ್ದರು.

ಇಂದು ಕಾಲೇಜುಗಳಲ್ಲಿ ಹಳಗನ್ನಡ ಪಾಠ ಮಾಡುವವರು ಯಾರು ಎಂಬ ಪ್ರಶ್ನೆಯೂ ಮೂಡುತ್ತಿದೆ. ಈ ಕಾರಣಕ್ಕೆ ಹಳಗನ್ನಡ ಸಾಹಿತ್ಯವನ್ನು ಪಠ್ಯದಿಂದ ಕೈಬಿಡಲಾಗುತ್ತಿದೆ ಎಂದರು. ಕೇಶಿರಾಜನ ಶಬ್ದಮಣಿದರ್ಪಣ ಕೃತಿ ಕೂಡ ಇಂದು ಕನ್ನಡ ಸಾಹಿತ್ಯವನ್ನು ಐಚ್ಛಿಕ ವಿಷಯವಾಗಿ ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಪಠ್ಯದಲ್ಲೂ ಕಾಣದಾಗಿದೆ ಎಂದು ಅವರು ಹೇಳಿದರು. ಇಂದಿನ ಮಕ್ಕಳಿಗೆ ಮಹಾಪ್ರಾಣವಿಲ್ಲದ ಕನ್ನಡ ಅಕ್ಷರಮಾಲೆಯನ್ನು ಕಲಿಸಿದರೆ ಅವರು ಹಳಗನ್ನಡ ಸಾಹಿತ್ಯವನ್ನು ಓದುವುದಾದರೂ ಹೇಗೆ? ಕೇವಲ ಅಲ್ಪಪ್ರಾಣ ಅಕ್ಷರ ಮಾಲೆಗಳನ್ನಷ್ಟೆ ಕಲಿಸಿದರೆ ಮುಂದೆ ಕನ್ನಡಕ್ಕೂ, ಸಂಸ್ಕöÈತ ಭಾಷೆಗೆ ಬಂದ ಪರಿಸ್ಥಿತಿ ಬರುವ ಸಾಧ್ಯತೆ ಇದೆ ಎಂದರು.

ಕನ್ನಡದಂತಹ ಸತ್ವ ಇರುವ ಸಾಹಿತ್ಯ ಪರಂಪರೆಯನ್ನು ತಿಳಿಯಬೇಕೆನ್ನುವ ಹಂಬಲ ಅಧ್ಯಯನಾಸಕ್ತರಿಗೆ ಒಂದಲ್ಲ ಒಂದು ಕಾಲದಲ್ಲಿ ಮೂಡಬಹುದು. ಆಗ ಕಾಲ ಮಿಂಚಿ ಹೋಗಿರುತ್ತದೆ. ಭಾಷಾ ಕೌಶಲ ಸಿಗಬೇಕಾದರೆ ಸಾಹಿತ್ಯ ಅಧ್ಯಯನ ಅಗತ್ಯವಿದೆ. ಭಾಷಾ ತರಗತಿಗಳ ಉದ್ದೇಶ ಏನು ಎಂಬುದನ್ನು ನಾವು ಅರ್ಥೆÊಸಿಕೊಂಡಿಲ್ಲ. ಇಂತಹ ತರಗತಿಗಳಲ್ಲಿ ಸಾಹಿತ್ಯದ ಮೂಲಕ ಭಾಷೆಯನ್ನು ಕಲಿಸುವ ಪ್ರಯತ್ನ ಮಾಡಬೇಕು. ಭಾಷಾ ತರಗತಿಗಳನ್ನು ನಿರ್ವಹಿಸುವಲ್ಲಿನ ಸಮಸ್ಯೆಯಿಂದಾಗಿ ಇಂದು ನಮ್ಮಲ್ಲಿ ವಿದ್ಯಾರ್ಥಿಗಳು ಮಾನವಿಕ ವಿಷಯಗಳ ಆಸಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಹಳಗನ್ನಡ ಸಾಹಿತ್ಯ ಇಂಗ್ಲಿಷ್ ಭಾಷೆಗೆ ಇನ್ನಷ್ಟು ಅನುವಾದಗೊಳ್ಳಬೇಕು ಎಂದರು.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಕೇಶವ ಪ್ರಶಸ್ತಿ ಪ್ರಾಯೋಜಕರಲ್ಲೋರ್ವರಾದ ತಾಳ್ತಜೆ ವಸಂತ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಾಹಿತಿ, ಯಕ್ಷಗಾನ ಅರ್ಥದಾರಿ  ಡಾ. ರಮಾನಂದ ಬನಾರಿ ಅವರಿಗೆ ಕೇಶವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಾಹೆ ಕುಲಸಚಿವ ಡಾ ಪಿ ಗಿರಿಧರ ಕಿಣಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.  ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಆರ್.ಆರ್.ಸಿ ಸಹ ಸಂಶೋಧಕ ಡಾ. ಅರುಣ್ ಕುಮಾರ್ ಎಸ್. ಆರ್. ಪ್ರಶಸ್ತಿ ಪುರಸ್ಕöÈತರ ಕುರಿತು ಅಭಿನಂದನಾ ಭಾಷಣ ಮಾಡಿದರು.  ಎಂ.ಜಿ.ಎಂ ಕಾಲೇಜಿನ ವಿದ್ಯಾರ್ಥಿನಿ ಕು. ಅನನ್ಯಾ ಎಸ್. ಶಿವತ್ತಾಯ ಪ್ರಾರ್ಥಿಸಿದರು. ಎಂ.ಜಿ.ಎಂ ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ರಾಘವೇಂದ್ರ ತುಂಗ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

No comments: