ಗಾಯನ ಸ್ಪರ್ಧೆ
47ನೆಯ
‘ವಾದಿರಾಜ ಕನಕದಾಸ ಸಂಗೀತೋತ್ಸವ’
ಕಾರ್ಯಕ್ರಮವು ಡಿಸೆಂಬರ್ 28,2025 ಆದಿತ್ಯವಾರದಂದು
ಉಡುಪಿಯ
ಎಂ.ಜಿ.ಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ,
ಬೆಂಗಳೂರು,
ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ,
ಕನಕದಾಸ ಅಧ್ಯಯನ ಸಂಶೋಧನ ಪೀಠ,
ಉಡುಪಿ,
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್,
ಎಂ.ಜಿ.ಎಂ ಕಾಲೇಜು,
ಉಡುಪಿ,
ಸರಿಗಮ ಭಾರತಿ ಸಂಗೀತ ವಿದ್ಯಾಲಯ
(ರಿ)
ಪರ್ಕಳ ಸಂಸ್ಥೆಗಳು ಸಂಘಟಿಸಿವೆ.
ಸಂಗೀತೋತ್ಸವದ ಪ್ರಯುಕ್ತ ಪ್ರಾಥಮಿಕ,
ಪ್ರೌಢ,
ಕಾಲೇಜು,
ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ವಾದಿರಾಜ-ಕನಕ ಗಾಯನ ಸ್ಪರ್ಧೆ ದಿನಾಂಕ:
27.12.2025 ರಂದು ಬೆಳಿಗ್ಗೆ 9.00 ಗಂಟೆಗೆ ಸರಿಯಾಗಿ ಎಂ.ಜಿ.ಎಂ ಕಾಲೇಜಿನ ಆವರಣದಲ್ಲಿರುವ ರವೀಂದ್ರ ಮಂಟಪದಲ್ಲಿ ನಡೆಸಲಾಗುವುದು.
ಸ್ಪರ್ಧಾಳುಗಳು ವಾದಿರಾಜರ ಮತ್ತು ಕನಕದಾಸರ ಎರಡೆರಡು ಕೀರ್ತನೆಗಳನ್ನು ಅಭ್ಯಸಿಸಿದ್ದು,
ತೀರ್ಪುಗಾರರು ಕೇಳುವ ಕೀರ್ತನೆಯನ್ನು ಹಾಡಲು ಶಕ್ತರಿರಬೇಕು.
ಭಾಗವಹಿಸಲು ಇಚ್ಛಿಸುವವರು ತಮ್ಮ ಹೆಸರನ್ನು ಆಡಳಿತಾಧಿಕಾರಿಗಳು,
ಕನಕದಾಸ ಅಧ್ಯಯನ ಸಂಶೋಧನ ಪೀಠ,
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ,
ಎಂ.ಜಿ.ಎಂ ಕಾಲೇಜು ಆವರಣ,
ಉಡುಪಿ ೫೭೬೧೦೨ ಈ ವಿಳಾಸಕ್ಕೆ ಕಳುಹಿಸಿಕೊಡಬಹುದು,
ಅಥವಾ ಸ್ಥಳದಲ್ಲೇ ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ದೂರವಾಣಿ:
9964140601 /
9449471449 / 9448868868
ಇಮೇಲ್:
rgpaiudupi@gmail.com
No comments:
Post a Comment